ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.

ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.

ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

3 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

22 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago