ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.
ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.
ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…