ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.

ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.

ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

8 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

19 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

19 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

24 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago