ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯಿತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ನಟ ಪ್ರಥಮ್, ರಕ್ಷಕ್ ಬುಲೆಟ್ ಬಂದಿದ್ದರು ಎನ್ನಲಾಗಿತ್ತು. ಈ ವೇಳೆ ಪ್ರಥಮ್ ಗೆ ಯಶಸ್ವಿನಿ ಮತ್ತು ಬೇಕರಿ ರಘು ಮಾರಾಕಾಸ್ತ್ರಗಳ ತೋರಿಸಿ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ರಕ್ಷಕ್ ಬುಲೆಟ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ಇಂದು ರಕ್ಷಕ್ ಬುಲೆಟ್ ವಿಚಾರಣೆಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ರಕ್ಷಕ್ ಬುಲೆಟ್, ಘಟನೆ ಕುರಿತು ಈಗಾಗಲೇ ಪೋಲೀಸರಿಗೆ ಮಾಹಿತಿ ನೀಡಿದ್ದೇನೆ. ಘಟನೆ ನಡೆದ ದಿನ ಯಶಸ್ವಿನಿ, ದಾಸ ಸೇರಿ ಕೆಲವೇ ಕೆಲವು ಜನ ಮಾತ್ರ ಇದ್ದೆವು. ಅಲ್ಲಿ ನಡೆದ ಘಟನೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ನಾವು ಕಲಾವಿದರ ಮನೆಯಿಂದ ಬಂದವರು. ಗೂಂಡಾಗಿರಿ ಮಾಡೋಕೆ ಬಂದಿಲ್ಲ. ನಾವು ಇನ್ನೂ ಬೆಳೆಯಬೇಕು ಹೇಳಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…