ನಟ ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ

ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ ಸಮೇತ ಅಮೇರಿಕಾದ ವಾಷಿಂಗ್ಟನ್ ನ ಸಿಯಾಟಲ್‌ ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.

ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.

ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

4 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

8 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

24 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago