ನಟ ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ

ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ ಸಮೇತ ಅಮೇರಿಕಾದ ವಾಷಿಂಗ್ಟನ್ ನ ಸಿಯಾಟಲ್‌ ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.

ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.

ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Ramesh Babu

Journalist

Recent Posts

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

8 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago