Categories: ಸಿನಿಮಾ

ನಟ ರಿಷಭ್ ಶೆಟ್ಟಿಗೆ ಒಲಿದ ಅತ್ಯುತ್ತಮ ನಟ ಪ್ರಶಸ್ತಿ: ಅತ್ಯುತ್ತಮ ಕನ್ನಡ ಚಿತ್ರವಾಗಿ ಹೊರಹೊಮ್ಮಿದ ಕೆಜಿಎಫ್-2

ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಇದರಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಭ್ ಶೆಟ್ಟಿ ಅವರ ಪಾಲಾಗಿದೆ.

ಅದೇರೀತಿ ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲೂ ‘ಕಾಂತಾರ’ ಪ್ರಶಸ್ತಿ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.

ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ.

Ramesh Babu

Journalist

Share
Published by
Ramesh Babu

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago