Categories: Trending

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ.‌ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.

ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್‌ನಲ್ಲಿರುವ ಬಂಜಾರಾ ಹಿಲ್ಸ್‌ನ ತಾಜ್‌ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.

ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್‌ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

7 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

16 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

21 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

1 day ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago