Categories: Trending

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ.‌ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.

ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್‌ನಲ್ಲಿರುವ ಬಂಜಾರಾ ಹಿಲ್ಸ್‌ನ ತಾಜ್‌ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.

ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್‌ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

2 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

14 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

17 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

19 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

21 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

22 hours ago