Categories: Trending

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ.‌ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.

ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್‌ನಲ್ಲಿರುವ ಬಂಜಾರಾ ಹಿಲ್ಸ್‌ನ ತಾಜ್‌ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.

ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್‌ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

3 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

6 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

7 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

15 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago