ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ. ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.
ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.
ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್ನಲ್ಲಿರುವ ಬಂಜಾರಾ ಹಿಲ್ಸ್ನ ತಾಜ್ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.
ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.
ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…