Categories: Trending

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ.‌ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.

ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್‌ನಲ್ಲಿರುವ ಬಂಜಾರಾ ಹಿಲ್ಸ್‌ನ ತಾಜ್‌ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.

ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್‌ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

8 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago