ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.
ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…