ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.
ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…