ನಡಿಗೆಯಲ್ಲಿ ಆರೋಗ್ಯ ಅಡಗಿದೆ: ಶಾಸಕ ಧೀರಜ್‌ ಮುನಿರಾಜ್

ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.

ಬೆಳ್ಳಂ ಬೆಳಿಗ್ಗೆ ಮಹಿಳೆಯರು ಮಕ್ಕಳು ಹಿರಿಯ ನಾಗರಿಕರು ನಾಲ್ಕು ಕಿಲೋ ಮೀಟರ್ ಗಳ ಕಾಲ್ನಡಿಗೆ ಯಲ್ಲಿ ಭಾಗವಹಿಸಿದ್ದರು. ನಡಿಗೆಗಾಗಿ ಆರೋಗ್ಯ ಆರೋಗ್ಯಕ್ಕಾಗಿ ನಡಿಗೆ ಘೋಷವಾಕ್ಯದೋಂದಿಗೆ ನಗರದ ವಾಸವಿ ಕಲ್ಯಾಣ ಮಂಟಪದಿಂದ ನಾಲ್ಕು ಕಿಲೋ ಮೀಟರ್ ಕಾಲ್ನಡಿಗೆ ಜಾಥಾ ಅರಂಭಗೊಂಡು ಕೋರ್ಟ್ ರಸ್ತೆ, ಬಸವ ಭವನ, ತಾಲೂಕು ಕಚೇರಿ ರಸ್ತೆ ಮೂಲಕ ಸಾಗಿ ವಾಸವಿ ಕಲ್ಯಾಣ ಮಂಟಪದ ಬಳಿ ಸಮಾಪ್ತಿಗೊಂಡಿತು.

ಜಾಥಾದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ, ಪದಕಗಳನ್ನು ಶಾಸಕ ಧೀರಜ್ ಮುನಿರಾಜು ವಿತರಿಸಿದರು.

ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು‌

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

14 minutes ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago