ನಡಿಗೆಯಲ್ಲಿ ಆರೋಗ್ಯ ಅಡಗಿದೆ: ಶಾಸಕ ಧೀರಜ್‌ ಮುನಿರಾಜ್

ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.

ಬೆಳ್ಳಂ ಬೆಳಿಗ್ಗೆ ಮಹಿಳೆಯರು ಮಕ್ಕಳು ಹಿರಿಯ ನಾಗರಿಕರು ನಾಲ್ಕು ಕಿಲೋ ಮೀಟರ್ ಗಳ ಕಾಲ್ನಡಿಗೆ ಯಲ್ಲಿ ಭಾಗವಹಿಸಿದ್ದರು. ನಡಿಗೆಗಾಗಿ ಆರೋಗ್ಯ ಆರೋಗ್ಯಕ್ಕಾಗಿ ನಡಿಗೆ ಘೋಷವಾಕ್ಯದೋಂದಿಗೆ ನಗರದ ವಾಸವಿ ಕಲ್ಯಾಣ ಮಂಟಪದಿಂದ ನಾಲ್ಕು ಕಿಲೋ ಮೀಟರ್ ಕಾಲ್ನಡಿಗೆ ಜಾಥಾ ಅರಂಭಗೊಂಡು ಕೋರ್ಟ್ ರಸ್ತೆ, ಬಸವ ಭವನ, ತಾಲೂಕು ಕಚೇರಿ ರಸ್ತೆ ಮೂಲಕ ಸಾಗಿ ವಾಸವಿ ಕಲ್ಯಾಣ ಮಂಟಪದ ಬಳಿ ಸಮಾಪ್ತಿಗೊಂಡಿತು.

ಜಾಥಾದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ, ಪದಕಗಳನ್ನು ಶಾಸಕ ಧೀರಜ್ ಮುನಿರಾಜು ವಿತರಿಸಿದರು.

ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು‌

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago