ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.
ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.
ಹಳೆಯ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.
ಹಳ್ಳಿಗಳಿಗೆ ಬರುವ ಬಹುತೇಕ ಬಸ್ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…