ನಡು ರಸ್ತೆಯಲ್ಲಿ ಕೆಟ್ಟು ನಿಂತ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು: ವಿದ್ಯಾರ್ಥಿಗಳ ಪರದಾಟ

ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ‌ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.

ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.

ಹಳೆಯ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರ ಪ್ರತಿ ಗ್ರಾಮಗಳಿಗೆ ಬಸ್‌ಗಳ ಸೌಕರ್ಯ ಕಲ್ಪಿಸಬೇಕು ಮತ್ತು ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲವಾಗಬೇಕೆಂಬ ಉದ್ದೇಶದಿಂದ ಸಾರಿಗೆ ಸಂಚಾರಕ್ಕಾಗಿ ಲಕ್ಷಾಂತರ ರೂ.ಖರ್ಚು ಮಾಡುತ್ತಿದೆ.

ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್‌ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.

ಹಳ್ಳಿಗಳಿಗೆ ಬರುವ ಬಹುತೇಕ ಬಸ್‌ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್‌ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್‌ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

10 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

19 hours ago