ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.
ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.
ಹಳೆಯ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.
ಹಳ್ಳಿಗಳಿಗೆ ಬರುವ ಬಹುತೇಕ ಬಸ್ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…