ನಡು ರಸ್ತೆಯಲ್ಲಿ ಕೆಟ್ಟು ನಿಂತ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು: ವಿದ್ಯಾರ್ಥಿಗಳ ಪರದಾಟ

ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ‌ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.

ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.

ಹಳೆಯ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರ ಪ್ರತಿ ಗ್ರಾಮಗಳಿಗೆ ಬಸ್‌ಗಳ ಸೌಕರ್ಯ ಕಲ್ಪಿಸಬೇಕು ಮತ್ತು ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲವಾಗಬೇಕೆಂಬ ಉದ್ದೇಶದಿಂದ ಸಾರಿಗೆ ಸಂಚಾರಕ್ಕಾಗಿ ಲಕ್ಷಾಂತರ ರೂ.ಖರ್ಚು ಮಾಡುತ್ತಿದೆ.

ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್‌ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.

ಹಳ್ಳಿಗಳಿಗೆ ಬರುವ ಬಹುತೇಕ ಬಸ್‌ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್‌ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್‌ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

5 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago