ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.
ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.
ಹಳೆಯ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.
ಹಳ್ಳಿಗಳಿಗೆ ಬರುವ ಬಹುತೇಕ ಬಸ್ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…