ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ ಬಸ್ಸುಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.
ಕೊಟ್ಟಿಗೆಮಾಚೇನಹಳ್ಳಿ ಬಸ್ ಹೊಸಹಳ್ಳಿ ಸಮೀಪದ ದೊಡ್ಡಹಾಳ್ಳದಲ್ಲಿ ಒಂದು ಬಸ್, ಉಜ್ಜನಿ ಬಸ್ ಹೊಸಹಳ್ಳಿ ಬಳಿಯ ಕೆಇಬಿ ಮುಂಭಾಗ ಕೆಟ್ಟು ನಿಂತಿದೆ.
ಹಳೆಯ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್ಗಳನ್ನು ಹಳ್ಳಿಗಳಿಗೆ ಬಿಡಲಾಗುತ್ತಿದೆ. ಇದರಿಂದ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.
ಹಳ್ಳಿಗಳಿಗೆ ಬರುವ ಬಹುತೇಕ ಬಸ್ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…