ನಡು ರಸ್ತೆಯಲ್ಲೇ ವಕ್ತಿಯೋರ್ವನ‌ ಬರ್ಬರ ಕೊಲೆ: ಕೊಲೆ ಮಾಡಿದ ಅರೋಪಿ ಪೊಲೀಸರಿಗೆ ಶರಣು

ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ‌ ಮುಂದೆ ನಡೆದಿದೆ.

ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ. ಮುಕ್ತಿಯಾರ್ ಪಾಷಾ ಕೊಲೆ ಮಾಡಿ ಪೊಲೀಸರಿಗೆ ಶರಣಾದ ವ್ಯಕ್ತಿ.

ನಿನ್ನೆ ಮಧ್ಯರಾತ್ರಿ ಕೊಲೆ ಮಾಡಿದ ಅರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *