ಹರಿಯಾಣದ ಪಾಣಿಪತ್ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿದಂತೆ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.
ನೌಲ್ತಾ ಗ್ರಾಮದ 32 ವರ್ಷದ ಪೂನಂ ಎಂಬ ಮಹಿಳೆ ಕಳೆದ ಎರಡು ವರ್ಷಗಳಲ್ಲಿ, ತನ್ನದೇ ಮೂರು ವರ್ಷದ ಮಗುವೂ ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.
ಸದ್ಯ ನಾಲ್ಕು ಮಕ್ಕಳ ಕೊಲೆ ಆರೋಪದ ಮೇಲೆ ಆ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಮಕ್ಕಳ ಸೌಂದರ್ಯದ ಬಗ್ಗೆ ತನಗಿದ್ದ ಅತಿಯಾದ ಅಸೂಯೆಯೇ ಈ ಕೊಲೆಗಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಭೂಪೇಂದ್ರ ಸಿಂಗ್ ಅವರು ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, “ಡಿಸೆಂಬರ್ 1ರ ಸಂಜೆ ನೌಲತಾ ಗ್ರಾಮದಲ್ಲಿ 6 ವರ್ಷದ ಬಾಲಕಿ ವಿಧಿ ತನ್ನ ಕೋಣೆಯೊಳಗೆ ನೀರಿನ ಟಬ್ನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿತ್ತು. ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಹುಡುಗಿಯ ಶವ ಪತ್ತೆಯಾದ ಕೋಣೆ ಹೊರಗಿನಿಂದ ಲಾಕ್ ಆಗಿರುವುದು ಕಂಡುಬಂದಿತ್ತು. ಹೀಗಾಗಿ, ಪ್ರಕರಣ ಅನುಮಾನಾಸ್ಪದವಾಗಿತ್ತು. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು ಹಾಗೂ ಕೊಲೆ ಶಂಕೆಯ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.
ಡಿಸೆಂಬರ್ 2 ರಂದು ಅಪರಾಧ ತಂಡ ಮತ್ತು ಡಿಎಸ್ಪಿ ನವೀನ್ ನೇತೃತ್ವದಲ್ಲಿ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಯಿತು. ತನಿಖೆಯಲ್ಲಿ ಬಾಲಕಿ ವಿಧಿ ಪಾಲ್ ಸಿಂಗ್ ಅವರ ಮನೆಯಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಮದುವೆ ಮೆರವಣಿಗೆ ಹೋದ ನಂತರ ಆಕೆ ಇದ್ದಕ್ಕಿದ್ದಂತೆ ಕಾಣೆಯಾಗಿ, ನಂತರ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು ಎಂದು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ ಕೊಲೆ ಆರೋಪಿ ಮಹಿಳೆ ತಾನು ಸುಂದರ ಹುಡುಗಿಯರನ್ನು ದ್ವೇಷಿಸುತ್ತೇನೆ ಮತ್ತು ಅವಕಾಶ ಸಿಕ್ಕಾಗಲೆಲ್ಲ ಅವರನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುತ್ತೇನೆ ಎಂದು ಹೇಳಿದ್ದಾಳೆ. ಅತ್ಯಂತ ಆಘಾತಕಾರಿ ವಿಷಯವೆಂದರೆ, ಅವಳು 2023ರಲ್ಲಿ ಸೋನಿಪತ್ನ ಭವಾರ್ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ನೀರಿನಲ್ಲಿ ಮುಳುಗಿಸಿ ಕೊಂದಿದ್ದಳು. ಅದೇ ರೀತಿ ಅವಳು ಇನ್ನೂ ಇಬ್ಬರು ಮಕ್ಕಳನ್ನು ಕೊಂದಿದ್ದಳು. ಈ ಪ್ರಕರಣ ಕುರಿತಂತೆ ಇಲ್ಲಿಯವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…