Categories: Crime

ನನಗಿಂತ ಅಂದ-ಚೆಂದವಾಗಿದ್ದಾರೆ ಅಂತಾ ಸ್ವಂತ ಮಗು ಸೇರಿ 4 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದ ಕಿರಾತಕಿ…!

ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿದಂತೆ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.

ನೌಲ್ತಾ ಗ್ರಾಮದ 32 ವರ್ಷದ ಪೂನಂ ಎಂಬ ಮಹಿಳೆ ಕಳೆದ ಎರಡು ವರ್ಷಗಳಲ್ಲಿ, ತನ್ನದೇ ಮೂರು ವರ್ಷದ ಮಗುವೂ ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಸದ್ಯ ನಾಲ್ಕು ಮಕ್ಕಳ ಕೊಲೆ ಆರೋಪದ ಮೇಲೆ ಆ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಮಕ್ಕಳ ಸೌಂದರ್ಯದ ಬಗ್ಗೆ ತನಗಿದ್ದ ಅತಿಯಾದ ಅಸೂಯೆಯೇ ಈ ಕೊಲೆಗಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಭೂಪೇಂದ್ರ ಸಿಂಗ್ ಅವರು ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, “ಡಿಸೆಂಬರ್ 1ರ ಸಂಜೆ ನೌಲತಾ ಗ್ರಾಮದಲ್ಲಿ 6 ವರ್ಷದ ಬಾಲಕಿ ವಿಧಿ ತನ್ನ ಕೋಣೆಯೊಳಗೆ ನೀರಿನ ಟಬ್‌ನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿತ್ತು. ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಹುಡುಗಿಯ ಶವ ಪತ್ತೆಯಾದ ಕೋಣೆ ಹೊರಗಿನಿಂದ ಲಾಕ್ ಆಗಿರುವುದು ಕಂಡುಬಂದಿತ್ತು. ಹೀಗಾಗಿ, ಪ್ರಕರಣ ಅನುಮಾನಾಸ್ಪದವಾಗಿತ್ತು. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು ಹಾಗೂ ಕೊಲೆ ಶಂಕೆಯ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.

ಡಿಸೆಂಬರ್ 2 ರಂದು ಅಪರಾಧ ತಂಡ ಮತ್ತು ಡಿಎಸ್​​ಪಿ ನವೀನ್ ನೇತೃತ್ವದಲ್ಲಿ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಯಿತು. ತನಿಖೆಯಲ್ಲಿ ಬಾಲಕಿ ವಿಧಿ ಪಾಲ್ ಸಿಂಗ್ ಅವರ ಮನೆಯಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಮದುವೆ ಮೆರವಣಿಗೆ ಹೋದ ನಂತರ ಆಕೆ ಇದ್ದಕ್ಕಿದ್ದಂತೆ ಕಾಣೆಯಾಗಿ, ನಂತರ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು ಎಂದು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಕೊಲೆ ಆರೋಪಿ ಮಹಿಳೆ ತಾನು ಸುಂದರ ಹುಡುಗಿಯರನ್ನು ದ್ವೇಷಿಸುತ್ತೇನೆ ಮತ್ತು ಅವಕಾಶ ಸಿಕ್ಕಾಗಲೆಲ್ಲ ಅವರನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುತ್ತೇನೆ ಎಂದು ಹೇಳಿದ್ದಾಳೆ. ಅತ್ಯಂತ ಆಘಾತಕಾರಿ ವಿಷಯವೆಂದರೆ, ಅವಳು 2023ರಲ್ಲಿ ಸೋನಿಪತ್‌ನ ಭವಾರ್ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ನೀರಿನಲ್ಲಿ ಮುಳುಗಿಸಿ ಕೊಂದಿದ್ದಳು. ಅದೇ ರೀತಿ ಅವಳು ಇನ್ನೂ ಇಬ್ಬರು ಮಕ್ಕಳನ್ನು ಕೊಂದಿದ್ದಳು. ಈ ಪ್ರಕರಣ ಕುರಿತಂತೆ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago