Categories: ರಾಜ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ರಚಿಸಿರುವ ‘ಬುದ್ಧ ನಾಗಾರ್ಜುನರ ಶೂನ್ಯಯಾನ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದಿದ್ದೆ. ಮರುದಿನವೇ ತಮ್ಮನ್ನು  ಕರೆದು ಮಾತನಾಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿತ್ತು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್ ಅವರು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಆಗಿರುತ್ತಿದ್ದರು ಎಂದರು.

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ  ಹೋಗಬೇಕಾದರೆ ನನ್ನಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧಿ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಆಗುವ ಕಡೆಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕೃಂತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ  ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

30 minutes ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

3 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

14 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

15 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

17 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

19 hours ago