Categories: ರಾಜ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ರಚಿಸಿರುವ ‘ಬುದ್ಧ ನಾಗಾರ್ಜುನರ ಶೂನ್ಯಯಾನ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದಿದ್ದೆ. ಮರುದಿನವೇ ತಮ್ಮನ್ನು  ಕರೆದು ಮಾತನಾಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿತ್ತು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್ ಅವರು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಆಗಿರುತ್ತಿದ್ದರು ಎಂದರು.

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ  ಹೋಗಬೇಕಾದರೆ ನನ್ನಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧಿ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಆಗುವ ಕಡೆಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕೃಂತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ  ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

Ramesh Babu

Journalist

Recent Posts

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

3 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

6 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

7 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

8 hours ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

9 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

9 hours ago