Categories: ರಾಜ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ರಚಿಸಿರುವ ‘ಬುದ್ಧ ನಾಗಾರ್ಜುನರ ಶೂನ್ಯಯಾನ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದಿದ್ದೆ. ಮರುದಿನವೇ ತಮ್ಮನ್ನು  ಕರೆದು ಮಾತನಾಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿತ್ತು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್ ಅವರು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಆಗಿರುತ್ತಿದ್ದರು ಎಂದರು.

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ  ಹೋಗಬೇಕಾದರೆ ನನ್ನಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧಿ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಆಗುವ ಕಡೆಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕೃಂತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ  ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago