Categories: ರಾಜ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ರಚಿಸಿರುವ ‘ಬುದ್ಧ ನಾಗಾರ್ಜುನರ ಶೂನ್ಯಯಾನ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದಿದ್ದೆ. ಮರುದಿನವೇ ತಮ್ಮನ್ನು  ಕರೆದು ಮಾತನಾಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿತ್ತು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್ ಅವರು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಆಗಿರುತ್ತಿದ್ದರು ಎಂದರು.

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ  ಹೋಗಬೇಕಾದರೆ ನನ್ನಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧಿ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಆಗುವ ಕಡೆಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕೃಂತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ  ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago