Categories: ರಾಜ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ರಚಿಸಿರುವ ‘ಬುದ್ಧ ನಾಗಾರ್ಜುನರ ಶೂನ್ಯಯಾನ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದಿದ್ದೆ. ಮರುದಿನವೇ ತಮ್ಮನ್ನು  ಕರೆದು ಮಾತನಾಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿತ್ತು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್ ಅವರು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಆಗಿರುತ್ತಿದ್ದರು ಎಂದರು.

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ  ಹೋಗಬೇಕಾದರೆ ನನ್ನಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧಿ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಆಗುವ ಕಡೆಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕೃಂತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ  ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago