Categories: ಲೇಖನ

ನನ್ನನ್ನು ನಾನು ಹುಡುಕುತ್ತಾ…

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,
ನೀನು ದಡ್ಡ – ಅಯೋಗ್ಯ,
ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ
ನನ್ನ ಮೊಮ್ಮಗ ಥೇಟ್
ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಷುಕೊಡಲು ನಿರಾಕರಿಸಿದರು,…….

ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

ಆದರೆ,
ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

ಆದರೆ,
ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

ಯಪ್ಪಾ, ………….

ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

7 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

13 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

17 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

18 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago