Categories: ಲೇಖನ

ನನ್ನನ್ನು ನಾನು ಹುಡುಕುತ್ತಾ…

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,
ನೀನು ದಡ್ಡ – ಅಯೋಗ್ಯ,
ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ
ನನ್ನ ಮೊಮ್ಮಗ ಥೇಟ್
ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಷುಕೊಡಲು ನಿರಾಕರಿಸಿದರು,…….

ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

ಆದರೆ,
ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

ಆದರೆ,
ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

ಯಪ್ಪಾ, ………….

ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

4 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

15 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

20 hours ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…

1 day ago