Categories: ಲೇಖನ

ನನ್ನನ್ನು ನಾನು ಹುಡುಕುತ್ತಾ…

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,
ನೀನು ದಡ್ಡ – ಅಯೋಗ್ಯ,
ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ
ನನ್ನ ಮೊಮ್ಮಗ ಥೇಟ್
ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಷುಕೊಡಲು ನಿರಾಕರಿಸಿದರು,…….

ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

ಆದರೆ,
ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

ಆದರೆ,
ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

ಯಪ್ಪಾ, ………….

ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

8 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

9 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

10 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

13 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

24 hours ago