Categories: ಲೇಖನ

ನನ್ನನ್ನು ನಾನು ಹುಡುಕುತ್ತಾ…

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,
ನೀನು ದಡ್ಡ – ಅಯೋಗ್ಯ,
ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ
ನನ್ನ ಮೊಮ್ಮಗ ಥೇಟ್
ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಷುಕೊಡಲು ನಿರಾಕರಿಸಿದರು,…….

ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

ಆದರೆ,
ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

ಆದರೆ,
ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

ಯಪ್ಪಾ, ………….

ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

4 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

4 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

15 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

15 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

17 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

20 hours ago