Categories: ಲೇಖನ

ನನ್ನನ್ನು ನಾನು ಹುಡುಕುತ್ತಾ…

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,
ನೀನು ದಡ್ಡ – ಅಯೋಗ್ಯ,
ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ
ನನ್ನ ಮೊಮ್ಮಗ ಥೇಟ್
ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಷುಕೊಡಲು ನಿರಾಕರಿಸಿದರು,…….

ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

ಆದರೆ,
ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

ಆದರೆ,
ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

ಯಪ್ಪಾ, ………….

ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

8 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

9 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

16 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

19 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago