ಪರೀಕ್ಷೆಯಲ್ಲಿ ಪಾಸ್ ಮಾಡಲು ವಿದ್ಯಾರ್ಥಿಗಳು ನಾನಾ ರೀತಿಯ ಬರಹಗಳನ್ನು ಬರೆಯುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಚಿತ್ರವಾಗಿ ಬೇಡಿಕೆ ಇಟ್ಟಿದ್ದಾನೆ.
ಉತ್ತರ ಪತ್ರಿಕೆಯನ್ನು ತಿದ್ದುವವರನ್ನೇ ಬ್ಲಾಕ್ಮೇಲ್ ಮಾಡಿದ್ದು, ಸದ್ಯ ಈ ಉತ್ತರಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ, “ಸರ್/ಮೇಡಂ, ನಾನು ನನಗೆ ತಿಳಿದಷ್ಟು ಮಾಡಿದ್ದೇನೆ,
ಈಗ ನನಗೆ ಏನು ಮಾಡಬೇಕೆಂದು ತಿಳಿದಿಲ್ಲ ದಯವಿಟ್ಟು ನನ್ನನ್ನು ಪಾಸ್ ಮಾಡಿ, ನಾನು ಪಾಸ್ ಆಗದಿದ್ದರೆ ನಮ್ಮ ಇಡೀ ಕುಟು೦ಬ ಸಾಯುತ್ತದೆ. ಸತ್ತ
ನಂತರ ನಾವು ದೆವ್ವಗಳಾಗಿ ನಿಮ್ಮೆಲ್ಲರನ್ನು ಹೆದರಿಸಿ ಬೆದರಿಸುತ್ತೇವೆ. ನನ್ನನ್ನು ಪಾಸ್ ಮಾಡದೇ ಇದ್ದರೆ ನಿಮಗೆ ಡೆಂಘಿ ಬರುತ್ತದೆ” ಎಂದೆಲ್ಲಾ ಬರೆದಿದ್ದಾನೆ.
ಈ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡುವ ಶಿಕ್ಷಕರು ಅದರ ಮೇಲೆ ಕೆಂಪು ರೇಖೆಯನ್ನು ಎಳೆದಿದ್ದಾರೆ. ಇನ್ನು ಉತ್ತರ ಪ್ರತಿ ವೈರಲ್ ಆಗುತ್ತಿದ್ದಂತೆ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಭಾರೀ ಚರ್ಚೆ
ನಡೆಯುತ್ತಿದ್ದು, ಉತ್ತರಗಳ ಬದಲು ಅವರು ನೆಪ ಮತ್ತು ಶಾಪಗಳನ್ನು ಬರೆಯುತ್ತಿದ್ದಾರೆಯೇ ಎಂಬ ಪ್ರಶ್ನೆ
ಉದ್ಭವಿಸಿದೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…