‘ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ’ -ಸಿಎಂ‌ ಸಿದ್ದರಾಮಯ್ಯ

ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಟಿ.ಎನ್.ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನನಗೆ ಪಕ್ಷದ ನಾಯಕರು ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮೇಲೆ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದೆ. ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ನನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದೆ ಎಂದರು.

ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು ಎಂದು ತಿಳಿಸಿದರು.

ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ  ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು.

ಈ ವೇಳೆ ಹಿರಿಯ ನಟ, ಆಪ್‌ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು, ಲೇಖಕಿಯರ ಸಂಘದ ಅಧ್ಯಕ್ಷರಾದ ಹೆಚ್.ಎಲ್ ಪುಷ್ಪ, ಏಷಿಯಾನೆಟ್ ಸುವರ್ಣ ಸಂಪಾದಕರಾದ ರವಿ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

10 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago