‘ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ’ -ಸಿಎಂ‌ ಸಿದ್ದರಾಮಯ್ಯ

ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಟಿ.ಎನ್.ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನನಗೆ ಪಕ್ಷದ ನಾಯಕರು ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮೇಲೆ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದೆ. ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ನನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದೆ ಎಂದರು.

ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು ಎಂದು ತಿಳಿಸಿದರು.

ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ  ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು.

ಈ ವೇಳೆ ಹಿರಿಯ ನಟ, ಆಪ್‌ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು, ಲೇಖಕಿಯರ ಸಂಘದ ಅಧ್ಯಕ್ಷರಾದ ಹೆಚ್.ಎಲ್ ಪುಷ್ಪ, ಏಷಿಯಾನೆಟ್ ಸುವರ್ಣ ಸಂಪಾದಕರಾದ ರವಿ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

9 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

11 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

11 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

12 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

16 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

17 hours ago