ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದರು.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರೃಣಿ ಎಂದು ತಿಳಿಸಿದ್ದಾರೆ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…