ನಮಗೆ ಬಿಬಿಎಂಪಿ ಕಸವು ಬೇಡ, ಅನುದಾನವೂ ಬೇಡ- ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆ ಮುಖ್ಯ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆ ಮಾಡುವ ಸಲುವಾಗಿ ಚಿಗರೇನಹಳ್ಳಿಯಲ್ಲಿನ ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸುವಂತೆ ಆಗ್ರಹಿಸಿ‌ ಮುಂದಿನ‌ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.‌ ಇದಕ್ಕೆ ಎಲ್ಲರು ಪಕ್ಷಾತೀತವಾಗಿ ಬೆಂಬಲಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಮನವಿ ಮಾಡಿದರು.

ನಗರದ ಡಾ.ಬಾಬುಜಗಜೀವನ್ ರಾಮ್ ಭವನದಲ್ಲಿ ಶನಿವಾರ ನಡೆದ ಗ್ರಾಮ ಪಂಚಾಯಿತಿ, ನಗರ ಸಭೆ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿ, ಎರಡು ವರ್ಷಗಳಿಂದಲೂ ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ಕಸ ಹಾಕುವುದಕ್ಕೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು ಎಂದು ತಿಳಿಸಿದರು.

ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ಸ್ಥಳೀಯ ಗ್ರಾಮ ಪಂಚಾಯಿತ ಹಾಗೂ ತಾಲ್ಲೂಕು ಆಡಳಿತದ ಗಮನಕ್ಕು ತರದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಸ ವಿಲೇವಾರಿ ಘಟಕ್ಕೆ ರಸ್ತೆ ನಿರ್ಮಿಸಿರುವ ಗುತ್ತಿಗೆದಾರನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಮಗೆ ಬಿಬಿಎಂಪಿ ಕಸವು ಬೇಡ, ಬಿಬಿಎಂಪಿ ಅನುದಾನವು ಬೇಡ ಎಂದರು.

ರಾಜ್ಯದಲ್ಲಿ ಸುಮಾರು 8 ಬಿಬಿಎಂಪಿ ಕಸ ವಿಲೇವಾರಿ ಘಟಕಗಳು ಇವೆ. ಅದರಲ್ಲಿ ನಮ್ಮ ದೊಡ್ಡಬಳ್ಳಾಪುರದಲ್ಲಿರೋದು ಖಾಸಗಿ ಒಡೆತನದಲ್ಲಿ ಇದೆ. ಇನ್ನುಳಿದ 7 ಕಸವಿಲೇವಾರಿ ಘಟಕಗಳು ಸರ್ಕಾರ ನೋಡಿಕೊಳ್ಳುತ್ತಿದೆ. ಖಾಸಗಿಯವರ ಉದ್ಧಾರ ಆಗೋದಕ್ಕೆ ನಾವು ಕಸ ಹಾಕಿಸಿಕೊಳ್ಳಬೇಕಾ…? ಕೂಡಲೇ ಈ ಘಟಕಕ್ಕೆ ಬರುವ ಕಸ ನಿಲ್ಲಬೇಕು ಎಂದು ಒತ್ತಾಯಿಸಿದರು.

ಸರ್ಕಾರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಅಭಿವೃದ್ಧಿ ಮಾಡಬೇಕೆನ್ನುವ ಚಿಂತೆ ಇಲ್ಲ. ಈ ಬಾರಿಯೇ ತಾಲೂಕಿನ ಮಜರಾಹೊಸಹಳ್ಳಿ, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರು ಒದಗಿಸಬೇಕು ಇದು ನಮ್ಮ ಆಗ್ರಹ ಎಂದರು.

ಸಭೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ಮುಖಂಡರಾದ ಕೆ.ಎಂ.ಹನುಮಂತರಾಯಪ್ಪ, ತಿ.ರಂಗರಾಜು, ವತ್ಸಲಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಇದ್ದರು.

Ramesh Babu

Journalist

View Comments

  • ಸಿ.ನರಸಿಂಹಮೂರ್ತಿ, ರಾಜ್ಯ ಉಪಾಧ್ಯಕ್ಷರು, ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ says:

    ಭ್ರಷ್ಟ ರಾಜಕಾರಿಣಿಗಳ ಪಾಲು ಹಾಗು ಕಸ ತಂದು ಸುರಿಯುವ ಲಾರಿಗಳಲ್ಲಿ ಪಾಲುದಾರಿಕೆ ಇದ್ದಲ್ಲಿ ನಿಲ್ಲಿಸುವ ತಾಕತ್ ಯಾರಿಗಿದೆ ಅಲ್ಲವೇ ??? ನಿಲ್ಲಿಸದಿದ್ದಲ್ಲಿ ಕೈಗೆ ಬಳೆ ತೊಡುವುದಕ್ಕೆ ಸಿದ್ದವೇ???ಭ್ರಷ್ಟರ ಲೋಕದಲ್ಲಿ ಅಮಾಯಕ ಜನರು

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

6 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

7 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

7 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

10 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

13 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

15 hours ago