ನಮಗೆ ಬಿಬಿಎಂಪಿ ಕಸವು ಬೇಡ, ಅನುದಾನವೂ ಬೇಡ- ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆ ಮುಖ್ಯ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆ ಮಾಡುವ ಸಲುವಾಗಿ ಚಿಗರೇನಹಳ್ಳಿಯಲ್ಲಿನ ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸುವಂತೆ ಆಗ್ರಹಿಸಿ‌ ಮುಂದಿನ‌ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.‌ ಇದಕ್ಕೆ ಎಲ್ಲರು ಪಕ್ಷಾತೀತವಾಗಿ ಬೆಂಬಲಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಮನವಿ ಮಾಡಿದರು.

ನಗರದ ಡಾ.ಬಾಬುಜಗಜೀವನ್ ರಾಮ್ ಭವನದಲ್ಲಿ ಶನಿವಾರ ನಡೆದ ಗ್ರಾಮ ಪಂಚಾಯಿತಿ, ನಗರ ಸಭೆ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿ, ಎರಡು ವರ್ಷಗಳಿಂದಲೂ ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ಕಸ ಹಾಕುವುದಕ್ಕೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು ಎಂದು ತಿಳಿಸಿದರು.

ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ಸ್ಥಳೀಯ ಗ್ರಾಮ ಪಂಚಾಯಿತ ಹಾಗೂ ತಾಲ್ಲೂಕು ಆಡಳಿತದ ಗಮನಕ್ಕು ತರದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಸ ವಿಲೇವಾರಿ ಘಟಕ್ಕೆ ರಸ್ತೆ ನಿರ್ಮಿಸಿರುವ ಗುತ್ತಿಗೆದಾರನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಮಗೆ ಬಿಬಿಎಂಪಿ ಕಸವು ಬೇಡ, ಬಿಬಿಎಂಪಿ ಅನುದಾನವು ಬೇಡ ಎಂದರು.

ರಾಜ್ಯದಲ್ಲಿ ಸುಮಾರು 8 ಬಿಬಿಎಂಪಿ ಕಸ ವಿಲೇವಾರಿ ಘಟಕಗಳು ಇವೆ. ಅದರಲ್ಲಿ ನಮ್ಮ ದೊಡ್ಡಬಳ್ಳಾಪುರದಲ್ಲಿರೋದು ಖಾಸಗಿ ಒಡೆತನದಲ್ಲಿ ಇದೆ. ಇನ್ನುಳಿದ 7 ಕಸವಿಲೇವಾರಿ ಘಟಕಗಳು ಸರ್ಕಾರ ನೋಡಿಕೊಳ್ಳುತ್ತಿದೆ. ಖಾಸಗಿಯವರ ಉದ್ಧಾರ ಆಗೋದಕ್ಕೆ ನಾವು ಕಸ ಹಾಕಿಸಿಕೊಳ್ಳಬೇಕಾ…? ಕೂಡಲೇ ಈ ಘಟಕಕ್ಕೆ ಬರುವ ಕಸ ನಿಲ್ಲಬೇಕು ಎಂದು ಒತ್ತಾಯಿಸಿದರು.

ಸರ್ಕಾರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಅಭಿವೃದ್ಧಿ ಮಾಡಬೇಕೆನ್ನುವ ಚಿಂತೆ ಇಲ್ಲ. ಈ ಬಾರಿಯೇ ತಾಲೂಕಿನ ಮಜರಾಹೊಸಹಳ್ಳಿ, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರು ಒದಗಿಸಬೇಕು ಇದು ನಮ್ಮ ಆಗ್ರಹ ಎಂದರು.

ಸಭೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ಮುಖಂಡರಾದ ಕೆ.ಎಂ.ಹನುಮಂತರಾಯಪ್ಪ, ತಿ.ರಂಗರಾಜು, ವತ್ಸಲಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಇದ್ದರು.

Ramesh Babu

Journalist

View Comments

  • ಸಿ.ನರಸಿಂಹಮೂರ್ತಿ, ರಾಜ್ಯ ಉಪಾಧ್ಯಕ್ಷರು, ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ says:

    ಭ್ರಷ್ಟ ರಾಜಕಾರಿಣಿಗಳ ಪಾಲು ಹಾಗು ಕಸ ತಂದು ಸುರಿಯುವ ಲಾರಿಗಳಲ್ಲಿ ಪಾಲುದಾರಿಕೆ ಇದ್ದಲ್ಲಿ ನಿಲ್ಲಿಸುವ ತಾಕತ್ ಯಾರಿಗಿದೆ ಅಲ್ಲವೇ ??? ನಿಲ್ಲಿಸದಿದ್ದಲ್ಲಿ ಕೈಗೆ ಬಳೆ ತೊಡುವುದಕ್ಕೆ ಸಿದ್ದವೇ???ಭ್ರಷ್ಟರ ಲೋಕದಲ್ಲಿ ಅಮಾಯಕ ಜನರು

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

1 hour ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

3 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

14 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

15 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago