ಮನುಷ್ಯನಿಗೆ ಕಂಠದಲ್ಲಿ ಉಸಿರು ಇರೋವರೆಗೆ ಮಾತ್ರ ಬೆಲೆ, ಸತ್ತ ಮೇಲೆ ಬೆಲೆ ಇದ್ದರೂ ಅದನ್ನು ಬದಿಗೊತ್ತಿ ಮೂರು ಕಾಸಿಗೂ ಬೆಲೆ ಇಲ್ಲದ ಹಾಗೆ ನಡೆಸಿಕೊಳ್ಳುವ ಉದಾಹರಣೆ ಕಂಡಿದ್ದೇವೆ. ಅದೇ ರೀತಿ ಬದುಕಿದ್ದಾಗ ಭೂಮಿ ಮೇಲೆ ಏನಿಕ್ಕೆ ಇದಾನೋ ಎಂದು ಹೇಳಿ ಸತ್ತಾಗ ಹೋದ್ನಲ್ಲಪ್ಪಾ…. ಎಂದು ಮೊಸಳೆ ಕಣ್ಣೀರಿಡುವವರನ್ನು ಕಂಡಿದ್ದೇವೆ. ಮನುಷ್ಯ ಸತ್ತ ಮೇಲೆ ನಗು ನಗುತಾ.. ಕಳುಹಿಸಿಕೊಟ್ಟರೆ ಮುಕ್ತಿ ಸಿಗುತ್ತೆ ಎಂಬ ಮಾತಿದೆ, ಅದು ಎಷ್ಟು ಸರಿನೋ ಗೊತ್ತಿಲ್ಲ.
ನಮ್ಮೂರಲ್ಲಿ ಒಂದು ಮುಕ್ತಿಧಾಮ ಇದೆ, ಇದು ಆರಂಭವಾದಾಗ ಶವಗಳನ್ನು ಸುಡುವ ಕಾಯಕಕ್ಕೆ ಗಂಡ-ಹೆಂಡತಿ ತೊಡಗಿಸಿಕೊಂಡಿರುತ್ತಾರೆ. ಏಳು ವರ್ಷಗಳ ಹಿಂದೆ ಗಂಡ ಅದೇ ಸ್ಥಳದಲ್ಲಿ ಮರಣ ಹೊಂದುತ್ತಾರೆ. ತನ್ನ ಗಂಡ ಇಲ್ಲ ಎಂದು ಬೇರೆಡೆ ಹೋಗಿ ಕೆಲಸ ಮಾಡದೇ ಅದೇ ಕೆಲಸವನ್ನು ಒಬ್ಬೊಂಟಿಯಾಗಿ ಸತತವಾಗಿ ಏಳು ವರ್ಷಗಳಿಂದ ಅಸುನೀಗಿದ ಶವಗಳಿಗೆ ಹಮ್ಮು-ಬಿಮ್ಮು ಇಲ್ಲದೇ ಧೈರ್ಯದಿಂದ ಆಧುನಿಕ ಹರಿಶ್ಚಂದ್ರನಂತೆ ಮುಕ್ತಿ ನೀಡುವ ಕಾಯಕ ಮಾಡಿಕೊಂಡು ಬರುತ್ತಿರುವ ವ್ಯಕ್ತಿ ಯಾರೆಂದರೆ ಅವರೆ ದಿಟ್ಟ ಮಹಿಳೆ ಲಕ್ಷ್ಮಮ್ಮ.
2019-2020 ವೇಳೆಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ಅಟ್ಟಹಾಸ ಹೆಚ್ಚಾಗಿ ಪ್ರತಿನಿತ್ಯ ಸಾವಿಗೀಡಾಗುವವರ ಸಂಖ್ಯೆ ಏರುತ್ತಲೆ ಇತ್ತು, ಜಿಲ್ಲಾಡಳಿತಕ್ಕೆ ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡುವುದು ದೊಡ್ಡ ತಲೆ ನೋವಾಗಿ ಪರಣಮಿಸಿತ್ತು, ಆಗ ಸಹಕಾರ ನೀಡಿದ್ದು ಇದೇ ಮುಕ್ತಿಧಾಮದಲ್ಲಿ ಕೆಲಸ ಮಾಡುವ ಲಕ್ಷ್ಮಮ್ಮ.
ಇವರ ಸೇವೆಗೆ ಮೆಚ್ಚಿ ಹಲವು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದೆ. ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿದ್ದಾರೆ.
ಒಟ್ಟಾರೆ ಈಕೆ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಒಬ್ಬ ಮಹಿಳೆ ಎಲ್ಲಾ ಕೆಲಸವನ್ನು ಮಾಡಬಹುದು ಎಂದು ತೋರಿಸಿಕೊಟ್ಟ ಮಹಿಳೆ. ಆದ್ದರಿಂದ ಈಕೆಯ ಸೇವೆಗೆ ನನ್ನದೊಂದು ಸಲಾಮ್.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…