ಮನುಷ್ಯನಿಗೆ ಕಂಠದಲ್ಲಿ ಉಸಿರು ಇರೋವರೆಗೆ ಮಾತ್ರ ಬೆಲೆ, ಸತ್ತ ಮೇಲೆ ಬೆಲೆ ಇದ್ದರೂ ಅದನ್ನು ಬದಿಗೊತ್ತಿ ಮೂರು ಕಾಸಿಗೂ ಬೆಲೆ ಇಲ್ಲದ ಹಾಗೆ ನಡೆಸಿಕೊಳ್ಳುವ ಉದಾಹರಣೆ ಕಂಡಿದ್ದೇವೆ. ಅದೇ ರೀತಿ ಬದುಕಿದ್ದಾಗ ಭೂಮಿ ಮೇಲೆ ಏನಿಕ್ಕೆ ಇದಾನೋ ಎಂದು ಹೇಳಿ ಸತ್ತಾಗ ಹೋದ್ನಲ್ಲಪ್ಪಾ…. ಎಂದು ಮೊಸಳೆ ಕಣ್ಣೀರಿಡುವವರನ್ನು ಕಂಡಿದ್ದೇವೆ. ಮನುಷ್ಯ ಸತ್ತ ಮೇಲೆ ನಗು ನಗುತಾ.. ಕಳುಹಿಸಿಕೊಟ್ಟರೆ ಮುಕ್ತಿ ಸಿಗುತ್ತೆ ಎಂಬ ಮಾತಿದೆ, ಅದು ಎಷ್ಟು ಸರಿನೋ ಗೊತ್ತಿಲ್ಲ.
ನಮ್ಮೂರಲ್ಲಿ ಒಂದು ಮುಕ್ತಿಧಾಮ ಇದೆ, ಇದು ಆರಂಭವಾದಾಗ ಶವಗಳನ್ನು ಸುಡುವ ಕಾಯಕಕ್ಕೆ ಗಂಡ-ಹೆಂಡತಿ ತೊಡಗಿಸಿಕೊಂಡಿರುತ್ತಾರೆ. ಏಳು ವರ್ಷಗಳ ಹಿಂದೆ ಗಂಡ ಅದೇ ಸ್ಥಳದಲ್ಲಿ ಮರಣ ಹೊಂದುತ್ತಾರೆ. ತನ್ನ ಗಂಡ ಇಲ್ಲ ಎಂದು ಬೇರೆಡೆ ಹೋಗಿ ಕೆಲಸ ಮಾಡದೇ ಅದೇ ಕೆಲಸವನ್ನು ಒಬ್ಬೊಂಟಿಯಾಗಿ ಸತತವಾಗಿ ಏಳು ವರ್ಷಗಳಿಂದ ಅಸುನೀಗಿದ ಶವಗಳಿಗೆ ಹಮ್ಮು-ಬಿಮ್ಮು ಇಲ್ಲದೇ ಧೈರ್ಯದಿಂದ ಆಧುನಿಕ ಹರಿಶ್ಚಂದ್ರನಂತೆ ಮುಕ್ತಿ ನೀಡುವ ಕಾಯಕ ಮಾಡಿಕೊಂಡು ಬರುತ್ತಿರುವ ವ್ಯಕ್ತಿ ಯಾರೆಂದರೆ ಅವರೆ ದಿಟ್ಟ ಮಹಿಳೆ ಲಕ್ಷ್ಮಮ್ಮ.
2019-2020 ವೇಳೆಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ಅಟ್ಟಹಾಸ ಹೆಚ್ಚಾಗಿ ಪ್ರತಿನಿತ್ಯ ಸಾವಿಗೀಡಾಗುವವರ ಸಂಖ್ಯೆ ಏರುತ್ತಲೆ ಇತ್ತು, ಜಿಲ್ಲಾಡಳಿತಕ್ಕೆ ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡುವುದು ದೊಡ್ಡ ತಲೆ ನೋವಾಗಿ ಪರಣಮಿಸಿತ್ತು, ಆಗ ಸಹಕಾರ ನೀಡಿದ್ದು ಇದೇ ಮುಕ್ತಿಧಾಮದಲ್ಲಿ ಕೆಲಸ ಮಾಡುವ ಲಕ್ಷ್ಮಮ್ಮ.
ಇವರ ಸೇವೆಗೆ ಮೆಚ್ಚಿ ಹಲವು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದೆ. ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿದ್ದಾರೆ.
ಒಟ್ಟಾರೆ ಈಕೆ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಒಬ್ಬ ಮಹಿಳೆ ಎಲ್ಲಾ ಕೆಲಸವನ್ನು ಮಾಡಬಹುದು ಎಂದು ತೋರಿಸಿಕೊಟ್ಟ ಮಹಿಳೆ. ಆದ್ದರಿಂದ ಈಕೆಯ ಸೇವೆಗೆ ನನ್ನದೊಂದು ಸಲಾಮ್.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…