ನಮ್ಮೂರಿನಲ್ಲಿ ಒಬ್ಬ ಆಧುನಿಕ ಹರಿಶ್ಚಂದ್ರನಂತೆ ಶವಗಳಿಗೆ ಮುಕ್ತಿ ನೀಡುವ ಕರ್ಮಯೋಗಿ ಲಕ್ಷ್ಮಮ್ಮ; ಕಾಯಕಯೋಗಿ ಲಕ್ಷ್ಮಮ್ಮ ಅವರಿಗೆ ನನ್ನದೊಂದು ಸಲಾಮ್

ಮನುಷ್ಯನಿಗೆ ಕಂಠದಲ್ಲಿ ಉಸಿರು ಇರೋವರೆಗೆ ಮಾತ್ರ ಬೆಲೆ, ಸತ್ತ ಮೇಲೆ ಬೆಲೆ ಇದ್ದರೂ ಅದನ್ನು ಬದಿಗೊತ್ತಿ ಮೂರು ಕಾಸಿಗೂ ಬೆಲೆ ಇಲ್ಲದ ಹಾಗೆ ನಡೆಸಿಕೊಳ್ಳುವ ಉದಾಹರಣೆ ಕಂಡಿದ್ದೇವೆ. ಅದೇ ರೀತಿ ಬದುಕಿದ್ದಾಗ ಭೂಮಿ‌ ಮೇಲೆ ಏನಿಕ್ಕೆ ಇದಾನೋ ಎಂದು ಹೇಳಿ ಸತ್ತಾಗ ಹೋದ್ನಲ್ಲಪ್ಪಾ…. ಎಂದು ಮೊಸಳೆ ಕಣ್ಣೀರಿಡುವವರನ್ನು ಕಂಡಿದ್ದೇವೆ. ಮನುಷ್ಯ ಸತ್ತ ಮೇಲೆ ನಗು ನಗುತಾ.. ಕಳುಹಿಸಿಕೊಟ್ಟರೆ ಮುಕ್ತಿ ಸಿಗುತ್ತೆ ಎಂಬ ಮಾತಿದೆ, ಅದು ಎಷ್ಟು ಸರಿನೋ ಗೊತ್ತಿಲ್ಲ.

ನಮ್ಮೂರಲ್ಲಿ ಒಂದು‌ ಮುಕ್ತಿಧಾಮ ಇದೆ, ಇದು ಆರಂಭವಾದಾಗ ಶವಗಳನ್ನು ಸುಡುವ ಕಾಯಕಕ್ಕೆ ಗಂಡ-ಹೆಂಡತಿ ತೊಡಗಿಸಿಕೊಂಡಿರುತ್ತಾರೆ. ಏಳು ವರ್ಷಗಳ ಹಿಂದೆ ಗಂಡ‌ ಅದೇ ಸ್ಥಳದಲ್ಲಿ ಮರಣ ಹೊಂದುತ್ತಾರೆ. ತನ್ನ ಗಂಡ ಇಲ್ಲ ಎಂದು ಬೇರೆಡೆ ಹೋಗಿ ಕೆಲಸ ಮಾಡದೇ ಅದೇ ಕೆಲಸವನ್ನು ಒಬ್ಬೊಂಟಿಯಾಗಿ ಸತತವಾಗಿ ಏಳು ವರ್ಷಗಳಿಂದ ಅಸುನೀಗಿದ ಶವಗಳಿಗೆ ಹಮ್ಮು-ಬಿಮ್ಮು ಇಲ್ಲದೇ ಧೈರ್ಯದಿಂದ ಆಧುನಿಕ ಹರಿಶ್ಚಂದ್ರನಂತೆ ಮುಕ್ತಿ ನೀಡುವ ಕಾಯಕ ಮಾಡಿಕೊಂಡು ಬರುತ್ತಿರುವ ವ್ಯಕ್ತಿ ಯಾರೆಂದರೆ ಅವರೆ ದಿಟ್ಟ ಮಹಿಳೆ ಲಕ್ಷ್ಮಮ್ಮ.

ಈಕೆ ಸುಮಾರು 7 ವರ್ಷಗಳಿಂದ ಹೆಣ ಸುಡುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ.  ಸಹಾಯಕನಿಂದ ಮೊದಲೆ ಶವ ಸುಡುವ ಸಿಲಿಕಾನ್ ಪೆಟ್ಟಿಗೆಯಲ್ಲಿ ಕಟ್ಟಿಗೆಯನ್ನು ಜೋಡಿಸಿ ಇಟ್ಟಿಕೊಂಡಿರುತ್ತಾರೆ ಶವ ಬಂದ ಕೂಡಲೇ ವಿಧಿ ವಿಧಾನಾಗಳನ್ನು ಪೂರೈಸಿ ಸುಡಲಾಗುತ್ತದೆ. ಒಂದು ಹೆಣ ಸಂಪೂರ್ಣವಾಗಿ ಸುಡಲು 5ರಿಂದ 6ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಅಂತ್ಯ ಸಂಸ್ಕಾರ ಮುಗಿದ ಕೂಡಲೇ ಬೂದಿಯನ್ನು ತೆಗೆದು ಸಿಲಿಕಾನ್ ಪೆಟ್ಟಿಗೆ ಸ್ವಚ್ಚಗೊಳಿಸಿ ಮತ್ತೊಂದು ಶವದ ಸಂಸ್ಕಾರಕ್ಕೆ ಅಣಿಯಾಗುತ್ತಾರೆ, ಇಲ್ಲಿಯ ವರೆಗೂ ಸುಮಾರು 5 ಸಾವಿರಕ್ಕೂ ಹೆಚ್ಚು ಶವಗಳಿಗೆ ಮುಕ್ತಿ ಕಲ್ಪಿಸಿದ ಕೀರ್ತಿ ಲಕ್ಷ್ಮಮ್ಮ ದಂಪತಿಗೆ ಸಲ್ಲುತ್ತದೆ.

2019-2020 ವೇಳೆಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ಅಟ್ಟಹಾಸ ಹೆಚ್ಚಾಗಿ ಪ್ರತಿನಿತ್ಯ ಸಾವಿಗೀಡಾಗುವವರ ಸಂಖ್ಯೆ ಏರುತ್ತಲೆ ಇತ್ತು, ಜಿಲ್ಲಾಡಳಿತಕ್ಕೆ ಕೋವಿಡ್‌ನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡುವುದು ದೊಡ್ಡ ತಲೆ ನೋವಾಗಿ ಪರಣಮಿಸಿತ್ತು, ಆಗ ಸಹಕಾರ ನೀಡಿದ್ದು ಇದೇ ಮುಕ್ತಿಧಾಮದಲ್ಲಿ ಕೆಲಸ ಮಾಡುವ ಲಕ್ಷ್ಮಮ್ಮ.

ಕೋವಿಡ್ ಸಂದರ್ಭದಲ್ಲಿ ಮುಕ್ತಿಧಾಮದ ಮುಂದೆ ಪ್ರತಿ ನಿತ್ಯ ಶವಗಳು ದಹನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದವು, ಈ ಸಂದರ್ಭದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆ ಸಹಜ ಸಾವಿಗೀಡಾದವರ ಅಂತ್ಯ ಸಂಸ್ಕಾರಕ್ಕೆ ಸಮಯ ನಿಗದಿ ಮಾಡಿ ಮತ್ತೆ ಸಂಜೆ 5 ರಿಂದ ಮಧ್ಯ ರಾತ್ರಿ ಸುಮಾರು 12 ರಿಂದ 1 ಗಂಟೆಯ ವರೆಗೆ ದೇವಾಂಗ ಮಂಡಳಿ , ತಾಲ್ಲೂಕು ಆಡಳಿತ, ನಗರಸಭೆ ಸಹಕಾರದೊಂದಿಗೆ ಲಕ್ಷ್ಮಮ್ಮ ನೂರಾರು ಶವಗಳ ಸಂಸ್ಕಾರ ನೆರವೇರಿಸಿದ್ದಾರೆ.

ಇವರ ಸೇವೆಗೆ ಮೆಚ್ಚಿ ಹಲವು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದೆ. ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿದ್ದಾರೆ.

ಒಟ್ಟಾರೆ ಈಕೆ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಒಬ್ಬ ಮಹಿಳೆ ಎಲ್ಲಾ ಕೆಲಸವನ್ನು ಮಾಡಬಹುದು ಎಂದು ತೋರಿಸಿಕೊಟ್ಟ ಮಹಿಳೆ. ಆದ್ದರಿಂದ ಈಕೆಯ ಸೇವೆಗೆ  ನನ್ನದೊಂದು‌ ಸಲಾಮ್‌.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

5 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

9 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

9 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

17 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago