ಮನುಷ್ಯನಿಗೆ ಕಂಠದಲ್ಲಿ ಉಸಿರು ಇರೋವರೆಗೆ ಮಾತ್ರ ಬೆಲೆ, ಸತ್ತ ಮೇಲೆ ಬೆಲೆ ಇದ್ದರೂ ಅದನ್ನು ಬದಿಗೊತ್ತಿ ಮೂರು ಕಾಸಿಗೂ ಬೆಲೆ ಇಲ್ಲದ ಹಾಗೆ ನಡೆಸಿಕೊಳ್ಳುವ ಉದಾಹರಣೆ ಕಂಡಿದ್ದೇವೆ. ಅದೇ ರೀತಿ ಬದುಕಿದ್ದಾಗ ಭೂಮಿ ಮೇಲೆ ಏನಿಕ್ಕೆ ಇದಾನೋ ಎಂದು ಹೇಳಿ ಸತ್ತಾಗ ಹೋದ್ನಲ್ಲಪ್ಪಾ…. ಎಂದು ಮೊಸಳೆ ಕಣ್ಣೀರಿಡುವವರನ್ನು ಕಂಡಿದ್ದೇವೆ. ಮನುಷ್ಯ ಸತ್ತ ಮೇಲೆ ನಗು ನಗುತಾ.. ಕಳುಹಿಸಿಕೊಟ್ಟರೆ ಮುಕ್ತಿ ಸಿಗುತ್ತೆ ಎಂಬ ಮಾತಿದೆ, ಅದು ಎಷ್ಟು ಸರಿನೋ ಗೊತ್ತಿಲ್ಲ.
ನಮ್ಮೂರಲ್ಲಿ ಒಂದು ಮುಕ್ತಿಧಾಮ ಇದೆ, ಇದು ಆರಂಭವಾದಾಗ ಶವಗಳನ್ನು ಸುಡುವ ಕಾಯಕಕ್ಕೆ ಗಂಡ-ಹೆಂಡತಿ ತೊಡಗಿಸಿಕೊಂಡಿರುತ್ತಾರೆ. ಏಳು ವರ್ಷಗಳ ಹಿಂದೆ ಗಂಡ ಅದೇ ಸ್ಥಳದಲ್ಲಿ ಮರಣ ಹೊಂದುತ್ತಾರೆ. ತನ್ನ ಗಂಡ ಇಲ್ಲ ಎಂದು ಬೇರೆಡೆ ಹೋಗಿ ಕೆಲಸ ಮಾಡದೇ ಅದೇ ಕೆಲಸವನ್ನು ಒಬ್ಬೊಂಟಿಯಾಗಿ ಸತತವಾಗಿ ಏಳು ವರ್ಷಗಳಿಂದ ಅಸುನೀಗಿದ ಶವಗಳಿಗೆ ಹಮ್ಮು-ಬಿಮ್ಮು ಇಲ್ಲದೇ ಧೈರ್ಯದಿಂದ ಆಧುನಿಕ ಹರಿಶ್ಚಂದ್ರನಂತೆ ಮುಕ್ತಿ ನೀಡುವ ಕಾಯಕ ಮಾಡಿಕೊಂಡು ಬರುತ್ತಿರುವ ವ್ಯಕ್ತಿ ಯಾರೆಂದರೆ ಅವರೆ ದಿಟ್ಟ ಮಹಿಳೆ ಲಕ್ಷ್ಮಮ್ಮ.
2019-2020 ವೇಳೆಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ಅಟ್ಟಹಾಸ ಹೆಚ್ಚಾಗಿ ಪ್ರತಿನಿತ್ಯ ಸಾವಿಗೀಡಾಗುವವರ ಸಂಖ್ಯೆ ಏರುತ್ತಲೆ ಇತ್ತು, ಜಿಲ್ಲಾಡಳಿತಕ್ಕೆ ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡುವುದು ದೊಡ್ಡ ತಲೆ ನೋವಾಗಿ ಪರಣಮಿಸಿತ್ತು, ಆಗ ಸಹಕಾರ ನೀಡಿದ್ದು ಇದೇ ಮುಕ್ತಿಧಾಮದಲ್ಲಿ ಕೆಲಸ ಮಾಡುವ ಲಕ್ಷ್ಮಮ್ಮ.
ಇವರ ಸೇವೆಗೆ ಮೆಚ್ಚಿ ಹಲವು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದೆ. ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿದ್ದಾರೆ.
ಒಟ್ಟಾರೆ ಈಕೆ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಒಬ್ಬ ಮಹಿಳೆ ಎಲ್ಲಾ ಕೆಲಸವನ್ನು ಮಾಡಬಹುದು ಎಂದು ತೋರಿಸಿಕೊಟ್ಟ ಮಹಿಳೆ. ಆದ್ದರಿಂದ ಈಕೆಯ ಸೇವೆಗೆ ನನ್ನದೊಂದು ಸಲಾಮ್.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…