ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ.
ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದ ಅವರು, ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಹೇಳಿದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…