Categories: ಲೇಖನ

ನಮ್ಮ ಎಲ್ಲ ಭಾವನೆಗಳನ್ನು ಮುಖವಾಡದ ಮರೆಯಲ್ಲಿಯೇ ವ್ಯಕ್ತಪಡಿಸಬೇಕು

” Looking ugly and madness is the ultimate status (Freedom ) of mind ”

” ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ ”
ಎಂಬ ಅರ್ಥದ ಇಂಗ್ಲೀಷ್ ನಾಣ್ಣುಡಿಯೊಂದು ಬಹಳ ಹಿಂದೆ ಓದಿದ ನೆನಪು…..

ವ್ಯಾವಹಾರಿಕ ಜಗತ್ತಿನಲ್ಲಿ ಇದು ಅಷ್ಟಾಗಿ ಅನ್ವಯವಾಗುವುದಿಲ್ಲ. ಏಕೆಂದರೆ ಇಲ್ಲಿ ಮುಖವಾಡಗಳೇ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತದೆ. ನಮ್ಮ ಎಲ್ಲ ಭಾವನೆಗಳನ್ನು ಸಹ ಮುಖವಾಡದ ಮರೆಯಲ್ಲಿಯೇ ವ್ಯಕ್ತಪಡಿಸಬೇಕು. ಕಾನೂನು, ನೈತಿಕತೆ, ಸಂಬಂಧಗಳು, ವ್ಯವಹಾರ, ಶಿಷ್ಟಾಚಾರ, ಕೊಳ್ಳುಬಾಕ ಸಂಸ್ಕೃತಿ ಎಲ್ಲವೂ ನಮ್ಮನ್ನು ಮುಖವಾಡದಲ್ಲಿ ಮರೆಮಾಚಿಕೊಳ್ಳಲು ಒತ್ತಡ ಹೇರುತ್ತದೆ. ಇಲ್ಲದಿದ್ದರೆ ಬದುಕು ನಡೆಯುವುದೇ ಇಲ್ಲ….

ಆದರೆ ನಿಜವಾದ ಸ್ವಚ್ಛಂದ ಮಾನಸಿಕ ಸ್ವಾತಂತ್ರ್ಯ ದೇವರು ಧರ್ಮದ ಹಂಗಿಲ್ಲದ, ಆಧ್ಯಾತ್ಮಿಕ ಸ್ಥಿತಪ್ರಜ್ಞತೆಯ ಭಾವದಲ್ಲಿ ಇದರ ಅನುಭವವಾಗುತ್ತದೆ…..

ಬಗೆಹರಿಸಲಾಗದ, ಗೊಂದಲದ ಪರಿಸ್ಥಿತಿಯಲ್ಲಿ, ವೈರುಧ್ಯಮಯ ಗುಣಗಳ ಜನರ ನಡುವೆ ಉಂಟಾಗುವ ಸಂಘರ್ಷಮಯ ಮನಸ್ಥಿತಿ ನಮ್ಮನ್ನು ಆ ಹಂತಕ್ಕೆ ತಲುಪಿಸುತ್ತದೆ….

ಸೌಂದರ್ಯ, ಅಧಿಕಾರ, ಆಸ್ತಿ, ಹಣ, ಸಂಬಂಧಗಳು, ಬುದ್ದಿವಂತಿಕೆ, ಒಳ್ಳೆಯತನ, ಹೆಸರು ಎಲ್ಲವೂ ನಮ್ಮನ್ನು ನಿರಂತರವಾಗಿ ಒತ್ತಡದಲ್ಲಿ ಇಟ್ಟಿರುತ್ತವೆ. ಇದು ಯಾವುವೂ ನಮಗೆ ನಮ್ಮ ಸ್ವಾತಂತ್ರ್ಯ ಅನುಭವಿಸಲು ಬಿಡುವುದಿಲ್ಲ. ಇವುಗಳನ್ನು ಗಳಿಸಿಕೊಳ್ಳಲು ಎಷ್ಟು ಶ್ರಮಪಡಬೇಕೋ ಅದನ್ನು ಉಳಿಸಿಕೊಳ್ಳಲು ಇನ್ನೂ ಹೆಚ್ಚು ಶ್ರಮಪಡಬೇಕು…..

ಅಸೂಯಾಪರ, ಉಢಾಪೆ ಮನೋಭಾವದ, ವಿಷಯಗಳ ಆಳವನ್ನು ಸಂಪೂರ್ಣವಾಗಿ ಗ್ರಹಿಸದ, ವ್ಯಕ್ತಿ ಸ್ವಾತಂತ್ರ್ಯದ ಅರ್ಥವೇ ಗೊತ್ತಿಲ್ಲದ, ತಮಗೆ ಯಾವ ರೀತಿಯು ಸಂಬಂಧವೇ ಇಲ್ಲದ ವಿಷಯಗಳಲ್ಲಿ ಮೂಗು ತೂರಿಸುವ ಜನರಿರುವ ಈ ಸಮಾಜದಲ್ಲಿ, ಕಾಲೆಳೆಯುವುದನ್ನೇ ಉದ್ಯೋಗ ಮಾಡಿಕೊಂಡಿರುವ ಒಂದು ವರ್ಗವೇ ಇದೆ. ಅದರ ನಡುವೆ ಹೋರಾಡಿ ನಮ್ಮ ಆ ಭ್ರಮಾಲೋಕದ ಪಟ್ಟವನ್ನು ಉಳಿಸಿಕೊಳ್ಳುವುದಕ್ಕಾಗಿಯೇ ಇಡೀ ಬದುಕನ್ನು ಸವೆಸಿಬಿಡುತ್ತೇವೆ. ನಮ್ಮ ಸ್ವಾತಂತ್ರ್ಯ ಅನುಭವಿಸಲು ಸಾಧ್ಯವೇ ಆಗುವುದಿಲ್ಲ…..

” ಪ್ರಪಂಚ ನನ್ನ ನೋಡಿ ನಕ್ಕಾಗ ನಾನು ಪ್ರಪಂಚ ನೋಡಿ ನಗುತ್ತೇನೆ ” ( When world Laugh’s at me I Laugh’s at the world )
ಎಂಬ ಮನಸ್ಥಿತಿ ನಮಗೆ ನಮ್ಮ ಬದುಕಿನ ಸ್ವಾತಂತ್ರ್ಯವನ್ನು ಮತ್ತೆ ಗಳಿಸಿಕೊಂಡುತ್ತದೆ….

ಇದೊಂದು ಹುಚ್ಚುತನ. ಎಲ್ಲರಿಗೂ ಸಾಧ್ಯವಾಗುವುದಿಲ್ಲ, ಬದುಕಿನ ಸಾಧನೆಗಳು, ವಿಫಲತೆಗಳು, ಸಂಕೀರ್ಣತೆ, ನೋವುಗಳು, ನಿರಾಸೆಗಳು, ಗೊಂದಲಗಳು, ಯಶಸ್ಸಿನ ಉತ್ತುಂಗದಲ್ಲಿ ಅನುಭವಿಸುವ ಶೂನ್ಯತೆ ಮುಂತಾದ ಅನೇಕ ಸನ್ನಿವೇಶಗಳ ಪರಿಣಾಮ ಆತ್ಮಹತ್ಯೆಯ ಹಂತ ಮೀರಿದ ಮೇಲೆ ಈ ಸ್ಥಿತಿ ನಿರ್ಮಾಣವಾಗುತ್ತದೆ…..

ಏಕೆಂದರೆ ದುರ್ಬಲ ಮನಸ್ಥಿತಿಯ ಜನ ಈ ಹಂತದಲ್ಲಿ ಆತ್ಮಹತ್ಯೆಗೆ ಅಥವಾ ದುಶ್ಚಟಗಳಿಗೆ ಅಥವಾ ಆಧ್ಯಾತ್ಮಿಕ ಸನ್ಯಾಸಕ್ಕೆ ಜಾರುವ ಸಾಧ್ಯತೆ ಹೆಚ್ಚು. ಅದನ್ನು ಮೀರಿ ಸಹಜವಾಗಿ ಅನುಭವಿಸುವ ಸ್ವಾತಂತ್ರ್ಯವೇ ಈ ಹುಚ್ಚು ಮನಸ್ಥಿತಿ…..

ಹಾಗೆಂದು ಇದು ಮಾನಸಿಕ ಅಸ್ವಸ್ಥತೆಯಲ್ಲ. ಅತ್ಯಂತ ಸಹಜ ಸ್ಥಿತಿ. ಆದರೆ ಇಂದಿನ ಅಸಹಜ ಜೀವನಶೈಲಿ, ಸಮಾಜ ಸೃಷ್ಟಿಸಿರುವ ಯಶಸ್ಸುಗಳ ಮಾನದಂಡ, ಜನರ ವೇಗದ ಬದುಕು ಸಹಜತೆಯನ್ನೇ ಅಸಹಜವಾಗಿ ಮಾಡಿದೆ. ಬದುಕು ಅವಕಾಶ ಕೊಟ್ಟರೆ ಇದನ್ನು ಅನುಭವಿಸಲು ಪ್ರಯತ್ನಿಸಿ. ಇನ್ನೊಬ್ಬರನ್ನು ಮೆಚ್ಚಿಸುವ ಹಂಗಿಲ್ಲದ ನಮ್ಮದೇ ಸ್ವತಂತ್ರ ಮನಸ್ಥಿತಿ ಇದು. ಜೊತೆಗೆ ಇದೊಂದು ಪ್ರಜಾಸತ್ತಾತ್ಮಕ ಗುಣ. ನಮ್ಮನ್ನು ಟೀಕಿಸುವವರಿಗೂ ಇದು ಅವಕಾಶ ಮಾಡಿಕೊಡುತ್ತದೆ….

ಈ ಸ್ಥಿತಿಯನ್ನು ಪದಗಳಲ್ಲಿ ವರ್ಣಿಸುವುದು ಸ್ವಲ್ಪ ಕಷ್ಟ. ಅದೊಂದು ಅನುಭಾವ. ಆದರೂ ಅದನ್ನು ಹಿಡಿದಿಡುವ ಒಂದು ಸಣ್ಣ ಪ್ರಯತ್ನ ಈ ಲೇಖನ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

6 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

17 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

18 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

23 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago