ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ, ಸರ್ಕಾರಿ ಜಾಗ ಉಳಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ತೆರವುಗೊಳಿಸಲಾಗಿದೆ.
ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮುಂದುವರಿಸಲು ನಗರಸಭೆ ವತಿಯಿಂದ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ.
ನಾವು ಸುಮಾರು ವರ್ಷಗಳಿಂದ ವ್ಯಾಪಾರವನ್ನೆ ನಂಬಿ ಜೀವನ ನಡೆಸುತ್ತಿದ್ದೇವೆ. ವ್ಯಾಪಾರ ಬಿಟ್ಟರೆ ನಮಗೆ ಏನೂ ಗೊತ್ತಿಲ್ಲ, ನಾವು ಅವಿದ್ಯಾವಂತರು, ಕಡುಬಡವರು ಕೂಡ ಹೌದು, ಆದರೆ ನಮ್ಮ ಮಕ್ಕಳು ನಮ್ಮಂತೆಯೇ ಅವಿದ್ಯಾವಂತರಾಗಿ, ಕಡುಬಡವರಾಗಿ ಇರಬಾರದು ಎರಡಕ್ಷರ ಕಲಿತು ಒಂದೊಳ್ಳೆ ಹುದ್ದೆ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ನಮ್ಮ ಆಸೆ. ಆದರೆ ನಮ್ಮ ಆಸೆ ನಿರಾಸೆಯಾಗುವ ಭಯದಲ್ಲಿದ್ದೇವೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಲು ಇಂದು ಬೆಳಿಗ್ಗೆ ಬೃಹತ್ ಜಾಥಾ ಮೂಲಕ ನಗರಸಭೆ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…