ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ, ಸರ್ಕಾರಿ ಜಾಗ ಉಳಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ತೆರವುಗೊಳಿಸಲಾಗಿದೆ.
ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮುಂದುವರಿಸಲು ನಗರಸಭೆ ವತಿಯಿಂದ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ.
ನಾವು ಸುಮಾರು ವರ್ಷಗಳಿಂದ ವ್ಯಾಪಾರವನ್ನೆ ನಂಬಿ ಜೀವನ ನಡೆಸುತ್ತಿದ್ದೇವೆ. ವ್ಯಾಪಾರ ಬಿಟ್ಟರೆ ನಮಗೆ ಏನೂ ಗೊತ್ತಿಲ್ಲ, ನಾವು ಅವಿದ್ಯಾವಂತರು, ಕಡುಬಡವರು ಕೂಡ ಹೌದು, ಆದರೆ ನಮ್ಮ ಮಕ್ಕಳು ನಮ್ಮಂತೆಯೇ ಅವಿದ್ಯಾವಂತರಾಗಿ, ಕಡುಬಡವರಾಗಿ ಇರಬಾರದು ಎರಡಕ್ಷರ ಕಲಿತು ಒಂದೊಳ್ಳೆ ಹುದ್ದೆ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ನಮ್ಮ ಆಸೆ. ಆದರೆ ನಮ್ಮ ಆಸೆ ನಿರಾಸೆಯಾಗುವ ಭಯದಲ್ಲಿದ್ದೇವೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಲು ಇಂದು ಬೆಳಿಗ್ಗೆ ಬೃಹತ್ ಜಾಥಾ ಮೂಲಕ ನಗರಸಭೆ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…