ನಮ್ಮ ಜೀವನ ಬೀದಿಪಾಲು ಮಾಡಬೇಡಿ-ರಸ್ತೆಬದಿ ವ್ಯಾಪಾರಸ್ಥರ ಅಳಲು

ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ, ಸರ್ಕಾರಿ ಜಾಗ ಉಳಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ತೆರವುಗೊಳಿಸಲಾಗಿದೆ.

ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮುಂದುವರಿಸಲು ನಗರಸಭೆ ವತಿಯಿಂದ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ.

ನಾವು ಸುಮಾರು ವರ್ಷಗಳಿಂದ ವ್ಯಾಪಾರವನ್ನೆ ನಂಬಿ ಜೀವನ ನಡೆಸುತ್ತಿದ್ದೇವೆ. ವ್ಯಾಪಾರ ಬಿಟ್ಟರೆ ನಮಗೆ ಏನೂ ಗೊತ್ತಿಲ್ಲ, ನಾವು ಅವಿದ್ಯಾವಂತರು, ಕಡುಬಡವರು ಕೂಡ ಹೌದು, ಆದರೆ ನಮ್ಮ ಮಕ್ಕಳು ನಮ್ಮಂತೆಯೇ ಅವಿದ್ಯಾವಂತರಾಗಿ, ಕಡುಬಡವರಾಗಿ ಇರಬಾರದು ಎರಡಕ್ಷರ ಕಲಿತು ಒಂದೊಳ್ಳೆ ಹುದ್ದೆ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ನಮ್ಮ ಆಸೆ. ಆದರೆ ನಮ್ಮ ಆಸೆ ನಿರಾಸೆಯಾಗುವ ಭಯದಲ್ಲಿದ್ದೇವೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹೌದು ಎಲ್ಲರ ಪ್ರಾಣವೂ ಅತ್ಯಮೂಲ್ಯ, ಅಪಘಾತಗಳಿಂದ ಸಾವಿಗೀಡಾದವರ ಬಗ್ಗೆ ನಮಗೂ ನೋವು, ಅನುಕಂಪ‌, ಸಂಕಟ ಇದೆ. ಆದರೆ ರಸ್ತೆಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತದೆ ಎನ್ನುವುದು ಸರಿಯಲ್ಲ, ಬದಲಾಗಿ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಅಜಾಗುರಕತೆಯಿಂದ ವಾಹನ ಚಲಾಯಿಸುವುದು, ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಂದ ಸೇರಿದಂತೆ ನಾನಾ ರೀತಿಯ ಕಾರಣಗಳಿಂದ ಅಪಘಾತಗಳು ಸಂಭವಿಸುತ್ತವೆ. ಎಲ್ಲರಿಗೂ ಪ್ರಾಣ ಇರುವಂತೆ ನಮಗೂ ಪ್ರಾಣ ಇದೆ. ನಮ್ಮ ಪ್ರಾಣದ ಬಗ್ಗೆಯೂ ಅಧಿಕಾರಿಗಳು, ಜನಪ್ರತಿನಿಧಿಗಳು ಯೋಚನೆ ಮಾಡಬೇಕು ಎಂದು ರಸ್ತೆ ಬದಿ ವ್ಯಾಪಾರಸ್ಥರು ಆಗ್ರಹಿಸಿದರು.

ಯಾರೋ ಪ್ರಭಾವಿಗಳ ಮಾತಿಗೆ ಅಧಿಕಾರಿಗಳು ಮಣಿದು ರಸ್ತೆಬದಿ ವ್ಯಾಪಾರಸ್ಥರನ್ನು ಬೀದಿಗೆ ತಂದಿದ್ದಾರೆ. ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಪಕ್ಷಪಾತ, ದಬ್ಬಾಳಿಕೆಯಿಂದ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿದರು.

ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಲು ಇಂದು ಬೆಳಿಗ್ಗೆ ಬೃಹತ್ ಜಾಥಾ ಮೂಲಕ ನಗರಸಭೆ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

4 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago